ಮೈಸೂರು: ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವ 2026 – ಮೊದಲ ಹಂತದಲ್ಲಿ ಆಗಮಿಸಲಿರುವ 9ಆನೆಗಳು.
ಧನಂಜಯ, ಮಹೇಂದ್ರ, ಏಕಲವ್ಯ, ಪ್ರಶಾಂತ, ಗೋಪಿ, ಶ್ರೀರಾಮ, ಸುಗ್ರೀವ, ಲಕ್ಷ್ಮೀ, ಕಾವೇರಿ ಆಗಮಿಸಲಿರುವ 9 ಆನೆಗಳು.
ದಸರಾ ಗಜಪಯಣಕ್ಕೆ ಕ್ಷಣಗಣನೆ. ಹುಣಸೂರಿನ ವೀರನಹೊಸಳ್ಳಿಯಲ್ಲಿ ಕಾರ್ಯಕ್ರಮ. ದಸರಾ ಗಜಪಡೆಗೆ ಚಾಲನೆ ನೀಡಲಿರುವ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ ಯತೀಂದ್ರ ಸಿದ್ದರಾಮಯ್ಯ. 10 ರಿಂದ 10.28ರ ಶುಭ ತುಲಾ ಲಗ್ನದಲ್ಲಿ ಗಜಪಡೆಗೆ ಪೂಜೆ ಸಲ್ಲಿಕೆ. ದಸರಾ ಗಜಪಡೆಗೆ ಪೂಜೆ ಸಲ್ಲಿಸಿ ಫಲತಾಂಬೂಲ ನೀಡುವ ಮೂಲಕ ಚಾಲನೆ. ಬಳಿಕ ಕಾಡಿನಿಂದ ನಾಡಿನತ್ತ ಹೆಜ್ಜೆ ಹಾಕಲಿರುವ ಗಜಪಡೆ. ಕಾರ್ಯಕ್ರಮದಲ್ಲಿ ಭಾಗಿಯಾಗಲಿರುವ ಜನಪ್ರತಿನಿದಿನಗಳು ಅಧಿಕಾರಿಗಳು.
ಗಜಪಯಣ ವೇಳೆ ಕ್ಯಾಪ್ಟನ್ ಅಭಿಮನ್ಯುವಿಗೆ ಬೀಳ್ಕೊಡುಗೆ ಸಲ್ಲಿಸಲಿರುವ ಅರಣ್ಯ ಇಲಾಖೆ. 6ಭಾರೀ ಚಿನ್ನದ ಅಂಬಾರಿ ಹೊತ್ತಿರುವ ಅಭಿಮನ್ಯು. ಅರಣ್ಯ ಇಲಾಖೆಯ ಅಚ್ಚುಮೆಚ್ಚಿನ ಆನೆಯಾಗಿರುವ ಅಭಿಮನ್ಯು. ಅಭಿಮನ್ಯುವಿಗೆ ಬೀಳ್ಕೊಡುಗೆ ನೀಡಬೇಕೆಂದು ಒತ್ತಾಯಿಸಿದ್ದ ಸಾರ್ವಜನಿಕರು. ಈ ಹಿನ್ನೆಲೆ ಗಜಪಯಣ ವೇಳೆ ಅಭಿಮನ್ಯುವಿಗೆ ಬೀಳ್ಕೊಡುಗೆ.
Discover more from BHAKTHI SANJEEVINI
Subscribe to get the latest posts sent to your email.



Leave a Reply