ಶ್ರೀ ಕ್ಷೇತ್ರ ಮಂಗಳಾದೇವಿ ದೇವಸ್ಥಾನಕ್ಕೆ ಶ್ರೀ ವಿನಯ್ ಗುರೂಜಿ ಭೇಟಿ
ಶ್ರೀ ಕ್ಷೇತ್ರ ಮಂಗಳಾದೇವಿ ದೇವಸ್ಥಾನಕ್ಕೆ ಶುಕ್ರವಾರ ಪ್ರಾತಃಕಾಲ ಗೌರಿಗದ್ದೆ ಆಶ್ರಮದ ಅವಧೂತರಾದ ಶ್ರೀ ವಿನಯ್ ಗುರೂಜಿಯವರು ಭೇಟಿ ನೀಡಿ ಶ್ರೀ ದೇವಿಯ ದರ್ಶನವನ್ನು ಪಡೆದು ವಿಶೇಷ ಪೂಜೆ ಸಲ್ಲಿಸಿದರು.

ದೇವಸ್ಥಾನಕ್ಕೆ ಆಗಮಿಸಿದ ಅವರು ತಾಯಿ ಮಂಗಳಾದೇವಿಗೆ ಫಲ, ಪುಷ್ಪ, ತಾಂಬೂಲ ಸೇರಿದಂತೆ ವಿವಿಧ ಸುವಸ್ತುಗಳನ್ನು ಸಮರ್ಪಿಸಿದರು. ಬಳಿಕ ದೇವಸ್ಥಾನದಲ್ಲಿ ನಡೆದ ಪೂಜಾ ವಿಧಿಗಳನ್ನು ನೆರವೇರಿಸಿ ಮಹಾತಾಯಿಯ ಕೃಪೆಗೆ ಪಾತ್ರರಾದರು.
ಈ ಸಂದರ್ಭದಲ್ಲಿ ಅವರು ದೇವಸ್ಥಾನದ ಪವಿತ್ರ ಪ್ರಸಾದವನ್ನು ಸ್ವೀಕರಿಸಿ ಸಂತೃಪ್ತಿಯನ್ನು ವ್ಯಕ್ತಪಡಿಸಿದರು. ದೇವಸ್ಥಾನದ ವತಿಯಿಂದ ಅವರಿಗೆ ಗೌರವ ಸೂಚಿಸಲಾಯಿತು.


Discover more from BHAKTHI SANJEEVINI
Subscribe to get the latest posts sent to your email.



Leave a Reply